ಶಿಕ್ಷಣ ಸಚಿವರಿಗೆ ಮನವಿ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಶಹಾಪುರ ನಗರಕ್ಕೆ ನೂತನ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಬಿ ಸಿ ನಾಗೇಶ್ ಜಿ ರವರಿಗೆ ಆಗಮಿಸಿದ್ದರಿಂದ ಅವರನ್ನು ಸನ್ಮಾನಿಸಲಾಯಿತು ಹಾಗೂ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಲಾಯಿತು. ಸಂಘದ ಬೇಡಿಕೆಗಳಿಗೆ ಧನಾತ್ಮಕವಾಗಿ ಸ್ಪಂದಿಸಿ, ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ KRMSS ನ ಜಿಲ್ಲಾ ಗೌರವಾಧ್ಯಕ್ಷರಾದ ಶ್ರೀಯುತ ಸುಧಾಕರ್ ಗುಡಿ , ಜಿಲ್ಲಾಧ್ಯಕ್ಷರಾದ ಶ್ರೀ ಅನಿಲ್ ಕುಮಾರ್ ಬಿರಾದರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ಶ್ರೀ ಬಿ ಜಿ ಪಾಟೀಲ್, ಸ್ಕೌಟ್ ಗೈಡ್‌ನ ಜಿಲ್ಲಾ ಪ್ರಮುಖರಾದ ಶ್ರೀ ಬಸವರಾಜ ಗೋಗಿ, ಶ್ರೀ ರಂಗಣ್ಣ, ಶ್ರೀ ಈರಣ್ಣ ಕೊಳ್ಳಿ ಸೇರಿದಂತೆ ಇನ್ನಿತರ ಶಿಕ್ಷಕರು ಭಾಗವಹಿಸಿದ್ದರು.

Highslide for Wordpress Plugin