ಬೆಂಗಳೂರು ದಕ್ಷಿಣ ಜಿಲ್ಲೆ : ಫೋನ್ ಇನ್ ಕಾರ್ಯಕ್ರಮ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ (ರಿ) ಬೆಂಗಳೂರು ದಕ್ಷಿಣ ಜಿಲ್ಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಗಾಗಿ ಫೋನ್ ಇನ್ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ದಿನಾಂಕ 24-2-2022 ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು ದಕ್ಷಿಣ ಜಿಲ್ಲೆಯ ಕಾರ್ಯಾಲಯದಲ್ಲಿ ಜರುಗಿತು.

ಮಾನ್ಯ ಉಪನಿರ್ದೇಶಕರಾದ ಶ್ರೀ ಬೈಲಾಂಜನಪ್ಪ ಪಿ.ರವರು ಫೋನ್ ಇನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಘದ ಈ ವಿನೂತನ ಕಾರ್ಯಕ್ರಮವನ್ನು ಶ್ಲಾಘಿಸಿ ಈ ವರ್ಷದ (2021-22) ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡು ಉತ್ತಮ ಫಲಿತಾಂಶವನ್ನು ನೀಡುವಂತಾಗಲಿ ಎಂದು ಶುಭ ಹಾರೈಸಿದರು.

ವಿಷಯ ಪರಿವೀಕ್ಷಕರಾದ ಶ್ರೀ ಕೆ. ಎಂ.ಜಿಯಾ ಉಲ್ಲಾ, ಶ್ರೀ ಕೆಂಪೇಗೌಡ, ಶ್ರಿಮತಿ ಅರ್ಚನಾ ನಾಯಕ್, ಶ್ರೀಮತಿ ಶಿಲ್ಪಾ ಅಕ್ಷರ ದಾಸೋಹ ಅಧಿಕಾರಿಗಳು ಉಪಸ್ಥಿ.ತರಿದ್ದರು. ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಚಿದಾನಂದ ಪಾಟೀಲ್, ಕೋಶಾಧ್ಯಕ್ಷರಾದ ಶ್ರೀ ಜೆ. ಎಂ.ಜೋಶಿ ಹಾಗೂ ಉತ್ತರ ಜಿಲ್ಲೆಯ ಅಧ್ಯಕ್ಷರಾದ ಶ್ರೀ ಗಂಗಪ್ಪ ರವರು ಭಾಗವಹಿಸಿ ಈ ಕಾರ್ಯಕ್ರಮಕ್ಕೆ ಮೆರಗನ್ನು ತಂದರು. ಕಾರ್ಯಕ್ರಮದ ಯಶಸ್ವಿಗೆ ಕಾರಣಕರ್ತರಾದ ಎಲ್ಲರಿಗೂ ಧನ್ಯವಾದಗಳು.

Highslide for Wordpress Plugin