ಚಿಕ್ಕೋಡಿ : ಫೋನ್-ಇನ್ ಕಾರ್ಯಕ್ರಮ

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಗದಗ ಜಿಲ್ಲೆ ಚಿಕ್ಕೋಡಿ ಹಾಗೂ ಸಂಘದ ಸಂಯುಕ್ತಾಶ್ರಯದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ನೇರ ಫೋನ್-ಇನ್ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಈ ಕಾರ್ಯಕ್ರಮವು ಎಸ್.ಎಸ್.ಎಲ್.ಸಿ ಪರೀಕ್ಷೆ ಮುಗಿಯುವರೆಗೂ ಚಾಲ್ತಿಯಲ್ಲಿರುತ್ತದೆ.

ಸದರಿ ಉದ್ಘಾಟನಾ ಸಮಾರಂಭದಲ್ಲಿ ಶಿಕ್ಷಣಾಧಿಕಾರಿಗಳಾದ ಶ್ರೀಯುತ ಎ ಸಿ ಗಂಗಾಧರ ಸರ್, ಆರ್ ಎಂ ಎಸ್ ಎ ಸಮನ್ವಯಾಧಿಕಾರಿಗಳಾದ ಶ್ರೀಯುತ ಆಂಜನೇಯ ಸರ್ ಮತ್ತು ಎಸ್ ಎಸ್ ಎಲ್ ಸಿ ಜಿಲ್ಲಾ ನೋಡಲ್ ಅಧಿಕಾರಿಗಳಾದ ಶ್ರೀಯುತ ಅರಿಹಂತ್ ಬಿರಾದಾರ್ ಪಾಟೀಲ್ ಸರ್ ಹಾಗೂ ಸಂಪನ್ಮೂಲ ವ್ಯಕ್ತಿಗಳು ಹಾಗು ಸಂಘದ ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Highslide for Wordpress Plugin