ಅನುದಾನಿತ ಪ್ರೌಢಶಾಲಾ ಶಿಕ್ಷಕರ ವೇತನ ವಿಳಂಬಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯ ಮಾನ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರೀತೇಶ ಕುಮಾರ್ ಸಿಂಗ್ ಅವರನ್ನು ಮತ್ತು ಆಯುಕ್ತರಾದ ಶ್ರೀ ಆರ್. ವಿಶಾಲ್ ಅವರನ್ನು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿದಾನಂದ ಪಾಟೀಲ, ರಾಜ್ಯ ಖಜಾಂಚಿಗಳಾದ ಶ್ರೀ ಜೆ.ಎಂ.ಜೋಷಿ, ಬೆಂಗಳೂರು ಉತ್ತರ ಜಿಲ್ಲೆಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಕೂಡಗಿ. ಜಿಲ್ಲಾ ಕಾರ್ಯದರ್ಶಿಗಳಾದ ಹರಿದಾಸ ಮತ್ತು ಉಪಾಧ್ಯಕ್ಷರಾದ ಶ್ರೀಮತಿ ಮಂಜು ರೂಪ ಅವರನ್ನು ಒಳಗೊಂಡ ಸಮಿತಿಯು ಭೇಟಿ ಮಾಡಿ, ರಾಜ್ಯದಲ್ಲಿ ಅನುದಾನಿತ ಪ್ರೌಢಶಾಲಾ ಶಿಕ್ಷಕರ ವೇತನ ವಿಳಂಬದ ಸಮಸ್ಯೆ ಯನ್ನು ಚರ್ಚೆ ಮಾಡಲಾಯಿತು. ಇಬ್ಬರು ಹಿರಿಯ ಅಧಿಕಾರಿಗಳು ಧನಾತ್ಮಕವಾಗಿ ಸ್ಪಂದಿಸಿದರು.