Chikkaswamy elected as Dist, President of KRVP Mandya Dist

Chikkaswamy elected as Dist, President of KRVP Mandya Dist

Mandya District Madhyamica Shikshak Sangha President Chikkaswamy elected unanimously as a Dist, President of KRVP Mandya Dist. Charge taken over by the past dist committee president Sri Puttaswamy, State Committee Directors Sri Guru and Aisha, Sri MN Ramachandra Past Dist Secretary Mamatha, Prof. Ramalingaiah, Chandrasekhar Aisha and others were Present.

ವಿಷಯ ತಜ್ಞರ ಕಾರ್ಯಾಗಾರ

ವಿಷಯ ತಜ್ಞರ ಕಾರ್ಯಾಗಾರ

ದಿನಾಂಕ 30-4-2017 ರಂದು ವಿಜಯ ಟೀಚರ್‍ಸ್ ಕಾಲೇಜ್, ಜಯನಗರ, ಬೆಂಗಳೂರು ಇಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದಿಂದ ಒಂದು ದಿನದ ವಿಷಯ ತಜ್ಞರ ಕಾರ್ಯಾಗಾರ ನಡೆಯಿತು. ಪೂಜನೀಯ ಶ್ರೀ ಕೈವಲ್ಯಾನಂದ ಸ್ವಾಮೀಜಿ, ಶ್ರೀ ಶಿವಾನಂದ ಮಠ, ಘೋಡಗೇರಿ, ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾನ್ಯ ವಿಧಾನಸಭಾ ಸದಸ್ಯರು ಮತ್ತು ಮಾಜಿ ಶಿಕ್ಷಣ ಮಂತ್ರಿಗಳು, ಶ್ರೀ ಬಾಲಕೃಷ್ಣ ಭಟ್, ಮಾಜಿ ವಿಧಾನಪರಿಷತ್ ಸದಸ್ಯರು, ರಾಷ್ಟ್ರೀಯ ಸಹ ಪ್ರಧಾನ ಕಾರ್ಯದರ್ಶಿ, ಅ.ಭಾ.ರಾ.ಶೈ.ಸಂಘ, ಶ್ರೀ ಕ್ಯಾಪ್ಟನ್ ಗಣೇಶ್ ಕಾರ್ನಿಕ್, ಮಾನ್ಯ ಮುಖ್ಯ […]

ಚಂದ್ರಶೇಖರ ಪಾಟೀಲ ಮತ್ತು ಮಹೇಶ ದೇವಣಿ ವಿಜ್ಞಾನ ಪರಿಷತ್‌ಗೆ ಆಯ್ಕೆ

ಚಂದ್ರಶೇಖರ ಪಾಟೀಲ ಮತ್ತು ಮಹೇಶ ದೇವಣಿ ವಿಜ್ಞಾನ ಪರಿಷತ್‌ಗೆ ಆಯ್ಕೆ

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿಗೆ ನಡೆದ ಚುನಾವಣೆಯಲ್ಲಿ ಖಜಾಂಚಿಯಾಗಿ ಚಂದ್ರಶೇಖರ ಪಾಟೀಲ ಮತ್ತು ಮಹೇಶ ದೇವಣಿ ಸದಸ್ಯರಾಗಿ ಇವರೀರ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಕಲಬುರಗಿ ವಿಭಾಗ ಪ್ರಮುಖ ಶ್ರೀ ಮಹೇಶ ಬಸರಕೋಡ ತಿಳಿಸಿದ್ದಾರೆ. ಚಂದ್ರಶೇಖರ ಪಾಟೀಲರು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಕಲಬುರಗಿ ಜಿಲ್ಲಾ ಅಧ್ಯಕ್ಷರಾಗಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಅಭಿನಂದಿಸುತ್ತದೆ.

ಮಾಧ್ಯಮಿಕ ಶಿಕ್ಷಕ ಸಂಘ ನೇತೃತ್ವ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ

ಮಾಧ್ಯಮಿಕ ಶಿಕ್ಷಕ ಸಂಘ ನೇತೃತ್ವ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ

ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಶಾಲಾ ಆಡಳಿತ ಮಂಡಳಿ-ನೌಕರರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ಖಾಸಗಿ ಆಡಳಿತ ಮಂಡಳಿಗಳ ಹಾಗೂ ನೌಕರರ ಒಕ್ಕೂಟದ ಕಾರ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ನೇತೃತ್ವದಲ್ಲಿ ಧಾರವಾಡದಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಯಿತು. ಖಾಸಗಿ ಶಾಲಾ-ಕಾಲೇಜುಗಳಿಗೆ ಬಂದ್ ಕರೆ ನೀಡಿದ್ದರಿಂದ ಶಾಲಾ-ಕಾಲೇಜುಗಳಿಗೆ ಸಾಮೂಹಿಕ ರಜೆ ಹಾಕಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ನೌಕರರು ಹಾಗೂ ಆಡಳಿತ ಮಂಡಳಿ ಸದಸ್ಯರು, ಕಡಪಾ ಮೈದಾನದಿಂದ ಡಿಸಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಿದರು. ಬಳಿಕ ಮಾಧ್ಯಮಿಕ […]

ಕ್ಯಾಲೆಂಡರ್ ಬಿಡುಗಡೆ

ಕ್ಯಾಲೆಂಡರ್ ಬಿಡುಗಡೆ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲಾ ಘಟಕಗಳು ಜಂಟಿಯಾಗಿ ದಿನಾಂಕ 12-4-2017 ೭ರಂದು ಸಂಜೆ 4.30 ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ಹೊಸವರ್ಷದ ಪಾಕೆಟ್ ಕ್ಯಾಲೆಂಡರ್ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವು ಬೆಂಗಳೂರು ದಕ್ಷಿಣ ಜಿಲ್ಲೆಯ ಅಧ್ಯಕ್ಷರಾದ ಶ್ರೀ ಸುರೇಂದ್ರರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳನ್ನು ಬೆಂಗಳೂರು ಉತ್ತರ ಜಿಲ್ಲೆಯ ಅಧ್ಯಕ್ಷರಾದ ಶ್ರೀ ಎಸ್.ಜಿ ತಾಂಬೆಯವರು ಪರಿಚಯಿಸಿ, ಸ್ವಾಗತಿಸಿದರು. ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಖಜಾಂಚಿಗಳಾದ ಶ್ರೀ ಜೆ.ಎಂ ಜೋಶಿಯವರು ಸಂಘವು […]

ಮಂಡ್ಯದಲ್ಲಿ ಕನ್ನಡ ಭಾಷಾ ಶಿಕ್ಷಕರಿಗಾಗಿ ಕಾರ್ಯಾಗಾರ

ಮಂಡ್ಯದಲ್ಲಿ ಕನ್ನಡ ಭಾಷಾ ಶಿಕ್ಷಕರಿಗಾಗಿ ಕಾರ್ಯಾಗಾರ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಮಂಡ್ಯ ಜಿಲ್ಲೆಯು ಕನ್ನಡ ಭಾಷಾ ಶಿಕ್ಷಕರಿಗಾಗಿ ನಡೆಸಿದ ಕಾರ್ಯಾಗಾರದಲ್ಲಿ ಅತಿಥಿಗಳು ಜ್ಯೋತಿ ಬೆಳಗುತ್ತಿರುವುದು.

ಮಂಡ್ಯದಲ್ಲಿ ಸಂಕಲ್ಪ ದಿನಾಚರಣೆ

ಮಂಡ್ಯದಲ್ಲಿ ಸಂಕಲ್ಪ ದಿನಾಚರಣೆ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಜಿಲ್ಲಾ ಘಟಕ ಮಂಡ್ಯದ ವತಿಯಿಂದ  ಸ್ವಾಮಿ ವಿವೇಕಾನಂದ ಮತ್ತು ಸುಭಾಷ್ ಚಂದ್ರ ಬೋಸ್ ಜಯಂತಿ ನಿಮಿತ್ತ ಸಂಕಲ್ಪ ದಿನಾಚರಣೆ ಏರ್ಪಡಿಸಲಾಗಿತ್ತು.

ಅಫ್ಜಲ್‌ಪುರದಲ್ಲಿ ಸಂಕಲ್ಪ ದಿನಾಚರಣೆ

ಅಫ್ಜಲ್‌ಪುರದಲ್ಲಿ ಸಂಕಲ್ಪ ದಿನಾಚರಣೆ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಅಫ್ಜಲ್‌ಪುರ ತಾಲೂಕಾ ಘಟಕದ ವತಿಯಿಂದ  ಅಫ್ಜಲ್‌ಪುರದಲ್ಲಿ ಸಂಘದ ವತಿಯಿಂದ  ಸಂಕಲ್ಪ ದಿನಾಚರಣೆ ಆಚರಿಸಲಾಯಿತು.

ಕಲಬುರ್ಗಿಯಲ್ಲಿ ಹೆಚ್.ಆರ್.ಎಂ.ಎಸ್. ತರಬೇತಿ ಕಾರ್ಯಾಗಾರ

ಕಲಬುರ್ಗಿಯಲ್ಲಿ ಹೆಚ್.ಆರ್.ಎಂ.ಎಸ್. ತರಬೇತಿ ಕಾರ್ಯಾಗಾರ

ಕಲಬುರ್ಗಿಯ ಜ್ಞಾನ ಸಿಂಚನಾ ಕಾಲೇಜಿನಲ್ಲಿ ಶಿಕ್ಷಣ ಇಲಾಖೆ ವೇತನ ಬಟವಾಡೆ ಅಧಿಕಾರಿಗಳಿಗಾಗಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ವತಿಯಿಂದ ಒಂದು ದಿನದ ಹೆಚ್.ಆರ್.ಎಂ.ಎಸ್. ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಾಗಾರದಲ್ಲಿ ವಿಕಲಚೇತನ ನರ್ಸಿಂಗ್ ವಿದ್ಯಾರ್ಥಿನಿ ನಾಗಮ್ಮ ಪರಮಣ್ಣ ಅವರಿಗೆ ಸಂಘದ ಸಹಾಯಾರ್ಥ 40 ಸಾವಿರ ರೂ. ಚೆಕ್ ನೀಡಲಾಯಿತು.

ಹುಬ್ಬಳ್ಳಿಯಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ವೇತನ ತಾರತಮ್ಯ ಹಾಗೂ ಕರ್ನಾಟಕ ಶಿಕ್ಷಣ ಕಾಯ್ದೆ ತಿದ್ದುಪಡಿ ವಿಧೇಯಕ ಕರಾಳ ಶಾಸನವನ್ನು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ವಿರೋಧಿಸಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ವಿಜಯನಗರ ಪದವಿಪೂರ್ವ ಮಹಾವಿದ್ಯಾಲಯದ ಪರೀಕ್ಷಾ ಕೇಂದ್ರದಲ್ಲಿ ಪ್ರಾಚಾರ್ಯರು, ಉಪನ್ಯಾಸಕರು ದ್ವಿತೀಯ ಪಿಯುಸಿ ಪರೀಕ್ಷಾ ಕಾರ್ಯದಲ್ಲಿ ಕಪ್ಪು ಪಟ್ಟಿ ಧರಿಸಿ ಭಾಗಿಯಾದರು.

Highslide for Wordpress Plugin