
ರಾಜ್ಯ ಮಟ್ಟದ ಹಿಂದಿ ಶಿಕ್ಷಕರ ಕಾರ್ಯಾಗಾರ
ಮೌಲ್ಯಮಾಪನ ಬಹುದೊಡ್ಡ ವಿಚಾರವಾಗಿದ್ದು, ಅದನ್ನು ಬಹು ಎಚ್ಚರಿಕೆಯಿಂದ ನಿಭಾಯಿಸಬೇಕಾಗಿದೆ ಎಂದು ಬೆಂಗಳೂರಿನ ಶೇಷಾದ್ರಿಪುರನಲ್ಲಿರುವ ಸಂಘದ ಕಾರ್ಯಾಲಯ ಯಾದವಸ್ಮೃತಿಯಲ್ಲಿ ದಿನಾಂಕ 10-2-2019 ರಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಹಿಂದಿ ಶಿಕ್ಷಕರ ಕಾರ್ಯಾಗಾರದಲ್ಲಿ ಶೈಕ್ಷಿಕ್ ಮಹಾಸಂಘದ ಪ್ರಧಾನ ಕಾರ್ಯದರ್ಶಿಯವರಾದ ಶ್ರೀ ಶಿವಾನಂದ ಸಿಂಧನಕೇರಾರವರು ಹೇಳಿದರು. ವಂದೇ ಮಾತರಂ ಮತ್ತು ತಾಯಿ ಶಾರದೆಯನ್ನು ನೆನೆಯುತ್ತ ಇಂದಿನ ಶಿಕ್ಷಣ ಮತ್ತು ಶಿಕ್ಷಕರ ಕಾರ್ಯಗಳ ಬಗ್ಗೆ ಮಾತನಾಡುತ್ತಾ, ಇಂದು ಪ್ರೌಢಶಿಕ್ಷಣ ಎಂಬ […]